ಲೇಖಕ ಎನ್. ಶಂಕರಪ್ಪ ತೋರಣಗಲ್ಲು ಅವರ ಕೃತಿ-ವಿಜ್ಞಾನಿಗಳು: ಜೀವನ- ಸಾಧನೆ. ಸಿ.ವಿ.ರಾಮನ್, ಮೇಡಂ ಕ್ಯೂರಿ, ನ್ಯೂಟನ್. ಥಾಮಸ್ ಅಲ್ವಾ ಎಡಿಸನ್, ಹೋಮಿ ಬಾಬಾ ಸೇರಿದಂತೆ 40ಕ್ಕೂ ಅಧಿಕ ವಿಶ್ವ ವಿಖ್ಯಾತ ವಿಜ್ಞಾನಿಗಳ ಜೀವನ, ವೈಜ್ಞಾನಿಕ ಸಂಶೋಧನೆಗಳ ಪರಿಚಯವನ್ನು ನೀಡಿದ್ದು, ಮಕ್ಕಳಿಗೆ ಮಾತ್ರವಲ್ಲ; ದೊಡ್ಡವರಿಗೂ ವಿಷಯ ಸಂಗ್ರಹದ ದೃಷ್ಟಿಯಿಂದ ಈ ಕೃತಿ ಮಹತ್ವ ಪಡೆಯುತ್ತದೆ. ಭಾಷೆ ಸರಳವಾಗಿದೆ. ವಿಜ್ಞಾನದ ಅತ್ಯಂತ ಕ್ಲಿಷ್ಟ ಪರಿಕಲ್ಪನೆಗಳನ್ನು ಸರಳವಾಗಿ ವಿವರಿಸಲಾಗಿದೆ.
ಲೇಖಕ ಎನ್ ಶಂಕರಪ್ಪ ತೋರಣಗಲ್ಲು ಮೂಲತಃ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದವರು. ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ವಿ.ವಿ.ಯಿಂದ ಸ್ನಾತಕೋತ್ತರ ಪದವೀಧರರು. ವೃತ್ತಿಯಲ್ಲಿ ಸಮಾಲೋಚಕ ಇಂಜಿನಿಯರ್ ಆಗಿದ್ದಾರೆ. ಕೃತಿಗಳು: ಸ್ವಾಮಿ ವಿವೇಕಾನಂದ ; ಕಪ್ಪು ಬಿಳುಪು (ಜನಪ್ರಿಯ ರಾಷ್ಟ್ರೀಯ ನಾಯಕ ವಿವೇಕಾನಂದ ಮತ್ತು ಅಜ್ಞಾತ ಸ್ವಾಮಿ ವಿವೇಕಾನಂದರನ್ನು ಬೇರ್ಪಡಿಸಿ ನೋಡಿದ್ದಾರೆ), ವಿಜ್ಞಾನ- ಏನು? ಹೇಗೆ? , ಸಂಗಂ - ತಮಿಳಗಂ, ಲಿಪಿ ನಿಗೂಢ, ಭಗವದ್ಗೀತೆ ಬೆಳಕು ನೀಡುವುದೇ?, ವಾಸ್ತು ಎಂಬ ವ್ಯಾಧಿ, ತಂತ್ರಜ್ಞಾನದ ದೇಸೀಕರಣ- ಕನ್ನಡದ ಜಾಗತೀಕರಣ, ಹಳಗನ್ನಡ- ಸಂಗಂ ತಮಿಳ್ ಮತ್ತು ಸಂಗಂ ಕಾಲದ ತೀರ್ಮಾನ .ಆರ್ಯರು ಯಾರು ? ...
READ MORE