ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರು ಬರೆದ ಕೃತಿ-ವೃದ್ದಾಪ್ಯಕ್ಕೆ ಸಿದ್ಧರಾಗೋಣ. ಬದುಕಿನ ವಿವಿಧ ಬೆಳವಣಿಗೆಯ ಹಂತದಲ್ಲಿ ಕೊನೆಯ ಹಂತವೇ ವೃದ್ದಾಪ್ಯ. ಮುಂಜಾಗ್ರತೆ ಇಲ್ಲದಿದ್ದರೆ ಈ ಹಂತವು ದುರಂತಮಯವಾಗುವುದು ಖಂಡಿತ. ವೃದ್ದಾಪ್ಯ ಎಂದರೇನು? ಅದು ಬದುಕಿನ ಕೊನೆಯ ದಿನಗಳಲ್ಲಿ ಬೀರುವ ಪ್ರಭಾವಗಳೇನು? ಮನೋ-ದೈಹಿಕವಾಗಿ ಉಂಟಾಗುವ ವೈಪರಿತ್ಯಗಳೇನು? ದೇಹ-ಮನಸ್ಸು ಈ ಹಂತದಲ್ಲಿ ಸದೃಢವಾಗಿರಬೇಕಾದರೆ ಯಾವ ರೀತಿಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು? ಹೇಗೆ ಹೊಂದಾಣಿಕೆ ಮಾಡಿಕೊಳ್ಳಬೇಕು? ಇತ್ಯಾದಿ ವಿಷಯಗಳಿರುವ ಕೃತಿ ಇದು.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE