‘ವ್ಯಕ್ತಿತ್ವ ವಿಕಸನಕ್ಕೆ 100 ಆದರ್ಶಗಳು’ ನಾಗರಾಜರಾವ್ ಎಂ.ವಿ ಅವರ ವ್ಯಕ್ತಿತ್ವ ವಿಕಸನ ಕುರಿತ ಲೇಖನಗಳ ಸಂಕಲನ. ವ್ಯಕ್ತಿಯೊಬ್ಬನು ತನ್ನ ಜೀವನದಲ್ಲಿ ಯಶಸ್ಸು ಕಾಣಲು ಅವನ ಸಾಮರ್ಥ್ಯ, ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಮುಂದಾಲೋಚನೆ ಅತ್ಯಂತ ಅವಶ್ಯಕವಾದದ್ದು. ಅಂತಹ ಜೀವನ ಮೌಲ್ಯಗಳನ್ನು ಪ್ರತಿಪಾದಿಸುವ ನೂರು ಪ್ರಸಂಗಗಳು ಈ ಕೃತಿಯಲ್ಲಿ ಸಂಕಲನಗೊಂಡಿವೆ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು 242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ. ಅನುವಾದಿತ ಕೃತಿಗಳು : ಜೇಮ್ಸ್ ಹ್ಯಾಡ್ಲಿ ...
READ MORE