
ಕೆನರಾ ಕಾಲೇಜಿನಲ್ಲಿ “BUSINESS ENVIRONMENT” ಪಠ್ಯಪುಸ್ತಕ ಬಿಡುಗಡೆ
Mangalore: ಕೆನರಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹಾರ್ದಿಕ್ ಪಿ. ಚೌಹಾಣ್ ಅವರು ಬರೆದ “BUSINESS ENVIRONMENT” ಎಂಬ ಕೋರ್ ಕೋರ್ಸ್ ಪಠ್ಯಪುಸ್ತಕವನ್ನು ಇಂದು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಎರಡನೇ ಸೆಮಿಸ್ಟರ್ ಬಿ.ಬಿ.ಎ. (SEP ಸಿಲಬಸ್) ಗಾಗಿ ಇದನ್ನು ಸಿದ್ಧಪಡಿಸಲಾಗಿದೆ.
ಕಾಲೇಜಿನ ಕರೆಸ್ಪಾಂಡೆಂಟ್ ಸಿಎ ಎಂ. ಜಗನ್ನಾಥ ಕಾಮತ್ ಅವರು ಕೃತಿ ಬಿಡುಗಡೆ ಮಾಡಿದರು. ಕಾಲೇಜಿನ ವ್ಯವಸ್ಥಾಪಕ ಕೆ. ಶಿವಾನಂದ ಶೆಣೈ, ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ.; ಉಪ ಪ್ರಾಂಶುಪಾಲೆ ಡಾ. ಕಲ್ಪನಾ ಪ್ರಭು ಜೆ. ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೇಜಮ್ಮ ಎ. ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಸೀಮಾ ಪ್ರಭು ಎಸ್. ಅವರು ಶುಭ ಹಾರೈಸಿದರು.
ಶೈಕ್ಷಣಿಕ ಕ್ಷೇತ್ರಕ್ಕೆ ಈ ಕೃತಿ ಒಂದು ಮಹತ್ವಪೂರ್ಣ ಕೊಡುಗೆ ಎಂದು ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.