
ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ
Mysuru : ಪರಮಪೂಜ್ಯ ಶ್ರೀವಿದ್ಯಾಶ್ರೀಶತೀರ್ಥಶ್ರೀಪಾದರು ಸ್ಥಾಪಿಸಿದ ಮೈಸೂರಿನ ಶ್ರೀವ್ಯಾಸತೀರ್ಥವಿದ್ಯಾಪೀಠವು ಅನೇಕಶಾಸ್ತ್ರಗಳನ್ನು ಪಾಠಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ. ಈ ವ್ಯಾಸತೀರ್ಥವಿದ್ಯಾಪೀಠವು ವಿದ್ಯಾಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿದ್ದು ಈಗ ಮತ್ತೊಂದು ಸಾಧನೆಯನ್ನು ಮಾಡಿದೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ಬಹುಮಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಾದ್ಯಂತ ಬರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಖ್ಯಾತನಾಮವಿದ್ವಾಂಸರು ಸ್ವತಃ ಪರೀಕ್ಷೆಯನ್ನು ಮಾಡಿ ನಿರ್ಣಯವನ್ನು ನೀಡಿರುತ್ತಾರೆ.
ಈ ಹಿಂದೆಯೂ ಅನೇಕ ಬಾರಿ ರಾಜ್ಯಮಟ್ಟದ ಹಾಗು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ವ್ಯಾಸತೀರ್ಥವಿದ್ಯಾಪೀಠದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಸ್ವರ್ಣ-ರಜತ -ಕಂಚಿನ ಪದಕಗಳನ್ನು ಪಡೆದಿರುತ್ತಾರೆ.
ಡಿ. ಪ್ರಣವಾಚಾರ್ಯ – ನ್ಯಾಯಭಾಷಣ – ರಜತಪದಕ.
ಶ್ರೀಶಾಚಾರ್ಯ ಅಯಾಚಿತ – ಬೌದ್ಧಭಾಷಣ – ರಜತಪದಕ.
ಚಿ. ವಲ್ಲಭ – ಸಾಹಿತ್ಯಶಲಾಕಾ-ಕಂಚಿನ ಪದಕ.