Back To Top

 ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ

Mysuru : ಪರಮಪೂಜ್ಯ ಶ್ರೀವಿದ್ಯಾಶ್ರೀಶತೀರ್ಥಶ್ರೀಪಾದರು ಸ್ಥಾಪಿಸಿದ ಮೈಸೂರಿನ ಶ್ರೀವ್ಯಾಸತೀರ್ಥವಿದ್ಯಾಪೀಠವು ಅನೇಕಶಾಸ್ತ್ರಗಳನ್ನು ಪಾಠಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ.  ಈ ವ್ಯಾಸತೀರ್ಥವಿದ್ಯಾಪೀಠವು ವಿದ್ಯಾಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿದ್ದು ಈಗ ಮತ್ತೊಂದು ಸಾಧನೆಯನ್ನು ಮಾಡಿದೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ಬಹುಮಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಾದ್ಯಂತ ಬರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಖ್ಯಾತನಾಮವಿದ್ವಾಂಸರು ಸ್ವತಃ ಪರೀಕ್ಷೆಯನ್ನು ಮಾಡಿ ನಿರ್ಣಯವನ್ನು ನೀಡಿರುತ್ತಾರೆ.

ಈ ಹಿಂದೆಯೂ ಅನೇಕ ಬಾರಿ ರಾಜ್ಯಮಟ್ಟದ ಹಾಗು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ವ್ಯಾಸತೀರ್ಥವಿದ್ಯಾಪೀಠದ ವಿದ್ಯಾರ್ಥಿಗಳು ಭಾಗವಹಿಸಿದ್ದು,  ಸ್ವರ್ಣ-ರಜತ -ಕಂಚಿನ ಪದಕಗಳನ್ನು ಪಡೆದಿರುತ್ತಾರೆ.

ಡಿ. ಪ್ರಣವಾಚಾರ್ಯ – ನ್ಯಾಯಭಾಷಣ – ರಜತಪದಕ.

ಶ್ರೀಶಾಚಾರ್ಯ ಅಯಾಚಿತ – ಬೌದ್ಧಭಾಷಣ – ರಜತಪದಕ. 

ಚಿ. ವಲ್ಲಭ – ಸಾಹಿತ್ಯಶಲಾಕಾ-ಕಂಚಿನ ಪದಕ.

Prev Post

ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

Next Post

Ujire: ಧೀಮಂತ್ ಹಾಗೂ ಧೀಮಹಿ ವಿದ್ಯಾರ್ಥಿ ನಿಲಯದಲ್ಲಿ ‘ಧೀಮ್ ಬೀಟ್ಸ್ – 2025’…

post-bars

Leave a Comment

Related post