ಅಥರ್ವ ವೇದ: ಒಂದು ಅಧ್ಯಯನ- ಈ ಕೃತಿಯನ್ನು ಲೇಖಕ ಶೇಷ ನವರತ್ನ ಬರೆದಿದ್ದು, ಅಥರ್ವ ವೇದದ ವ್ಯಾಖ್ಯಾನ ನೀಡಿದ್ದಾರೆ. ಇಲ್ಲಿ 20 ಕಾಂಡಗಳೂ, 760 ಸೂಕ್ತಗಳೂ, 6000 ಮಂತ್ರಗಳನ್ನು ಒಳಗೊಂಡಿವೆ. ಗದ್ಯ ಹಾಗೂ ಪದ್ಯ ಶೈಲಿಯಲ್ಲಿ ರಚಿತವಾಗಿದೆ. ವಿವಾಹ ಪದ್ಧತಿ,ಶವಸಂಸ್ಕಾರ, ಗೃಹನಿರ್ಮಾಣ ಹೀಗೆ ದಿನನಿತ್ಯದ ಜೀವನಕ್ಕೆ ಸಂಬಂಧಿಸಿದ ವಿಚಾರಗಳಿವೆ. ಮಾಟ ಮಂತ್ರ, ಯಕ್ಷಿಣಿವಿದ್ಯೆ,ಇಂದ್ರಜಾಲ ಮುಂತಾದ ವಿಷಯಗಳ ಪ್ರಸ್ತಾಪವಿದೆ. ಧನುರ್ವಿದ್ಯೆ, ರೋಗನಿವಾರಣೋಪಾಯ, ಔಷಧಿಗಳ ವಿವರಣೆಯೂ ಇದೆ. ಯಜ್ಞಯಾಗಾದಿಗಳನ್ನು ವಿವರವೂ ಇದೆ. ವೇದಗಳ ರಚನೆಯಲ್ಲಿ ಕೊನೆಯದೇ ಅಥರ್ವ ವೇದ.
ಶೇಷ ನವರತ್ನ ಅವರು 1950 ರ ಮೇ 5ರಂದು ಧಾರವಾಡದಲ್ಲಿ ಜನಿಸಿದರು. ಎಂ.ಎ. (ಇಂಗ್ಲಿಷ್) ಪದವೀಧರರು. ಸಾಹಿತ್ಯಕ ಮತ್ತು ತತ್ವಶಾಸ್ತ್ರೀಯ ಕೃತಿಗಳನ್ನು ರಚಿಸಿದ್ದಾರೆ. ಚಿಕ್ಕಜಾಜೂರು ಪಿಯು ಕಾಲೇಜು ಪ್ರಾಂಶುಪಾಲರಾಗಿ ನಿವೃತ್ತರು. ಧರ್ಮಗಳು, ಕರ್ಮ ಸಿದ್ದಾಂತ ಮತ್ತು ಪುನರ್ಜನ್ಮ ಮನಸೋಲ್ಲಾಸ, ನಿರ್ಣಯ ಸಿಂಧು, ಮಹಾಭಾರತದಲ್ಲಿ ಧರ್ಮ, ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ (ಸಾಹಿತ್ಯಕ-ತತ್ವಶಾಸ್ತ್ರೀಯ). ಹರೆಯದ ಹುಚ್ಚು, ಊರ್ಮಿಳಾ, ಮಲನಾಡ ಗಿಣಿ, ಮೀರಾಬಾಯಿ (ಕವನ ಸಂಕಲನ). ಕಬೀರ್, ಸೂರದಾಸ್ ಮುಂತಾದವರ ಕವಿತೆಗಳ ಅನುವಾದ. ಅವರಿಗೆ ವೇದಾಂತರತ್ನ, ಉಜ್ಜನಿ ಸದ್ಧರ್ಮ ಪೀಠ, ಆರ್ಯ ಸಮಾಜ ಮುಂತಾದ ಗೌರವಗಳು ಸಂದಿವೆ. 2013ರ ಡಿಸೆಂಬರ್ 15ರಂದು ನಿಧನರಾದರು. ...
READ MORE