ಬರ ಅಂದ್ರೆ ಎಲ್ಲರಿಗೂ ಇಷ್ಟ’ದಲ್ಲಿ ಸುಮಾರು 7೦ ಲೇಖನಗಳಿವೆ ಅವುಗಳನ್ನು 1೦ ಅಧ್ಯಾಯಗಳಾಗಿ ವಿಂಗಡಿಸಲಾಗಿದೆ.
'ಭಾರತೀಯ ಪತ್ರಿಕೋದ್ಯಮದ ಕೆಟ್ಟ ಹುಡುಗ' ಎಂಬ 'ಪ್ರಶಂಸೆ'ಗೆ ಗುರಿಯಾದವರು ಪಿ ಸಾಯಿನಾಥ್, ಈ ಕೆಟ್ಟ ಹುಡುಗ ಕಳೆದ 18 ವರ್ಷಗಳಿಂದ ದೇಶದ ಕಡು ಬಡ ಜಿಲ್ಲೆಗಳನ್ನು ಸುತ್ತುತ್ತಿದ್ದಾರೆ ಯಾವುದೇ ಭೂಪಟದಲ್ಲಿ ಕಾಣಿಸಿಕೊಳ್ಳದೇ ಹೋಗುವಂತಹ ಕುಗ್ರಾಮಗಳಲ್ಲಿ ವರ್ಷದ 300 ದಿನ ಕಳೆಯುವ ಸಾಯಿನಾಥ್ ಆ ಹಳ್ಳಿಗಳಿಗೆ, ಹಳ್ಳಿಯ ಜನತೆಗೆ ಘನತೆ ತಂದವರು. ಸಾಯಿನಾಥ್ ಅವರ ಸುತ್ತಾಟ ದೇಶದ ನೀತಿ ರೂಪಕರನ್ನು ತುದಿಗಾಲಲ್ಲಿ ನಿಲ್ಲಿಸುತ್ತದೆ. ಹಲವು ಪ್ರಧಾನಿಗಳು ಇವರು ಪ್ರಸ್ತಾಪಿಸಿದ ಹಳ್ಳಿಗಳತ್ತ ಧಾವಿಸುವಂತೆ ಮಾಡುತ್ತದೆ. ಅವರ ಈ ಕೃತಿ Everybody loves a good drought ದೇಶದ ಪ್ರಜ್ಞೆಯನ್ನು ಕಲಕಿದೆ. ಕನ್ನಡ ಪತ್ರಿಕೋದ್ಯಮದ ಮುಖ್ಯ ಹೆಸರಾದ ಜಿ ಎನ್ ಮೋಹನ್ ಈ ಕೃತಿಯನ್ನು ಕನ್ನಡಕ್ಕೆ ತಂದಿದ್ದಾರೆ
ಪತ್ರಕರ್ತ, ಲೇಖಕ ಜಿ.ಎನ್. ಮೋಹನ್ ಕನ್ನಡ ಪತ್ರಿಕೋದ್ಯಮದ ಪ್ರಮುಖರಲ್ಲೊಬ್ಬರು. ಪತ್ರಿಕೆ, ಎಲೆಕ್ಟ್ರಾನಿಕ್ ಹಾಗೂ ಆನ್ ಲೈನ್ ಮೂರು ಮಾಧ್ಯಮಗಳಲ್ಲಿ ನುರಿತವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ನಾಟಕದಲ್ಲಿ ಮೊದಲ ರ್ಯಾಂಕ್ ನೊಂದಿಗೆ ಪದವಿ ಹಾಗೂ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಪ್ರಜಾವಾಣಿಯ ವರದಿಗಾರರಾಗಿ, ಈಟಿವಿ ಚಾನಲ್ ನ ಹಿರಿಯ ಸಂಪಾದಕರಾಗಿ, ಸಮಯ ಚಾನಲ್ ಹಾಗೂ ಅವಧಿಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 'ಸೋನೆಮಳೆಯ ಸಂಜೆ', 'ಪ್ರಶ್ನೆಗಳಿರುವುದು ಶೇಕ್ಸ್ ಪಿಯರನಿಗೆ' ಕವನ ಸಂಕಲನಗಳು, 'ನನ್ನೊಳಗಿನ ಹಾಡು ಕ್ಯೂಬಾ' (ಪ್ರವಾಸ ಕಥನ), 'ಕಾಫಿ ಕಪ್ಪಿನೊಳಗೆ ಕೊಲಂಬಸ್'(ವಿಚಾರ ಕಥನ) ಇವರ ಪ್ರಮುಖ ಕೃತಿಗಳು. ಸಾಹಿತ್ಯ, ನಾಟಕ, ...
READ MORE