‘ಲಂಡನ್ ನಿಂದ ಅಂಡಮಾನ್ ಗೆ’ ಲೇಖಕ ಆಗುಂಬೆ ಎಸ್. ನಟರಾಜ್ ಅವರ ಪ್ರವಾಸ ಕಥನ. ಆಗುಂಬೆ ಎಸ್. ನಟರಾಜ್ ಒಬ್ಬ ಹವ್ಯಾಸಿ ಬರೆಹಗಾರ. ಅಲೆಮಾರಿ ಅನ್ವೇಷಕ ಎಂಬ ನಾಮ ಹೊತ್ತು ಭಾರತದ ಬಹುತೇಕ ಐತಿಹಾಸಿಕ ಸ್ಥಳಗಳನ್ನು, ಮೂರು ಬಾರಿ ಯೂರೋಪ್ ಪ್ರವಾಸ ಮಾಡಿ, ಹಲವಾರು ಪ್ರವಾಸ ಕಥನಗಳನ್ನು ರಚಿಸಿದ್ದಾರೆ. ಲಂಡನ್, ಪ್ಯಾರಿಸ್, ಬರ್ಲಿನ್, ಢಾಕಾ ನಗರಗಳನ್ನು ನೋಡಿದ ನಂತರ ಈ ನಗರಗಳ ಕೆಲವು ಐತಿಹಾಸಿಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಿದ್ದಾರೆ.
ಲೇಖಕ ನಟರಾಜ್, 1939 ನವೆಂಬರ್ 20 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹುಟ್ಟಿದರು. ತಂದೆ ಎ. ಎಸ್. ಭಟ್, ತಾಯಿ ಲಕ್ಷ್ಮಮ್ಮ. ಕಾಲೇಜು ದಿನಗಳಿಂದಲೂ ಸಾಹಿತ್ಯದ ಬಗ್ಗೆ ಒಲವಿದ್ದು, ನಿವೃತ್ತಿಯ ನಂತರ ಈಗ ಪೂರ್ಣ ಪ್ರಮಾಣದ ಬರಹಗಾರರು. ಸದಾ ಒಂದಿಲ್ಲೊಂದು ಕಡೆ ಪ್ರವಾಸ ಅಥವಾ ಬಿಡುವಿನ ವೇಳೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗುತ್ತಾರೆ. ಅವರ ಪ್ರವಾಸಾನುಭವದ ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಬಾತುಕೋಳಿ’ ಮತ್ತು ‘ಆತಂಕ’ ಎಂಬ ಎರಡು ಕಾದಂಬರಿಗಳು. ‘ಚಕ್ಕಂದ’ ಎಂಬ ಹನಿಗವನ ಸಂಕಲನ, ‘ರಸನಿಮಿಷ’ ಎಂಬ ಹಾಸ್ಯಕಥೆಗಳ ಸಂಗ್ರಹ. ‘ರಸ ವೈಚಾರಿಕತೆ’ ಎಂಬ ವೈಚಾರಿಕ ...
READ MORE