ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ ಅವರ ಕೃತಿ: `ರೇವಣಸಿದ್ಧ: ಹಿನ್ನೆಲೆ-ಮುನ್ನೆಲೆ'. ರೇವಣಸಿದ್ಧ ಅವರ ಕುರಿತು ಇರುವ ಪೌರಾಣಿಕ, ಐತಿಹಾಸಿಕ ಹಾಗೂ ಸಾಮಾಜಿಕ ಅಂಶಗಳನ್ನು ವಿಶ್ಲೇಷಿಸಿರುವ ಲೇಖಕರು ರೇವಣಸಿದ್ಧ ಅವರ ಬಗ್ಗೆ ಇರುವ ಎಲ್ಲ ವದಂತಿಗಳಿಗೆ ತಮ್ಮ ಸಂಶೋಧನೆ ಮೂಲಕ ಸ್ಪಷ್ಟತೆ ನೀಡಿದ್ದಾರೆ. ರೇವಣಸಿದ್ಧರು, ಅವರ ಲೋಕೋದ್ಧಾರದ ಉದ್ದೇಶಗಳು, ಇವರನ್ನು ಪೂಜಿಸುವ ಭಕ್ತ ಸಮೂಹ, ಈ ದೇವರ ಮೂಲ ಇತ್ಯಾದಿ ಕುರಿತು ವಾಸ್ತವಿಕ ನೆಲೆಯಲ್ಲಿ ಸಂಶೋಧನೆ ನಡೆಸಿದ್ದು ಈ ಕೃತಿಯ ಹೆಗ್ಗಳಿಕೆ.
ಹಿರಿಯ ಸಾಹಿತಿ - ಸಂಶೋಧಕರಾದ ಎಂ. ಚಿದಾನಂದ ಮೂರ್ತಿ ಅವರು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರಿನಲ್ಲಿ ಜನಿಸಿದರು. ತಂದೆ ಕೊಟ್ಟೂರಯ್ಯ ಮತ್ತು ತಾಯಿ ಪಾರ್ವತಮ್ಮ. 1931ರ ಮೇ 10 ರಂದು ಜನಿಸಿದ ಅವರು ನೀತಿಗೆರೆ, ಹಿರೇಕೋಗಲೂರು, ಸಂತೇಬೆನ್ನೂರುಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಿದರು. ನಂತರ ದಾವಣಗೆರೆಯಲ್ಲಿ ಪ್ರೌಢಶಾಲೆ-ಇಂಟರ್ ಮೀಡಿಯಟ್ ಶಿಕ್ಷಣ (1950) ಮುಗಿಸಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ. (ಆನರ್ಸ್) ಪದವಿ (1953) ಪಡೆದರು. ಅಧ್ಯಾಪಕರಾಗಿ ನೇಮಕಗೊಂಡರು. ನಂತರ ಎಂ. ಎ. ಪದವಿ (1957) ಪ್ರಥಮ ರ್ಯಾಂಕ್ನೊಂದಿಗೆ ಗಳಿಸಿದರು. 'ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ...
READ MORE