ಲೇಖಕ ಡಿ.ವಿ.ಗುರುಪ್ರಸಾದ್ ಅವರ ಪ್ರವಾಸ ಕಥನ ಕೃತಿ-ವಿಶ್ವ ಪರ್ಯಟನೆ. ತಾವು ಕೈಗೊಂಡ ವಿಶ್ವ ಪರ್ಯಟನೆಯಲ್ಲಿ ಕಂಡುಂಡ ಅನುಭವಗಳನ್ನು ಉತ್ತಮ ಶೈಲಿಯೊಂದಿಗೆ ನಿರೂಪಿಸಿದ್ದಾರೆ.
ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ. ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...
READ MORE