2025ನೇ ಸಾಲಿನ `ಈ ಹೊತ್ತಿಗೆ' ಪ್ರಶಸ್ತಿಗಾಗಿ ಹಸ್ತಪ್ರತಿ ಆಹ್ವಾನ

Date: 20-10-2024

Location: ಬೆಂಗಳೂರು


ಬೆಂಗಳೂರು: ಈ ಹೊತ್ತಿಗೆ ಟ್ರಸ್ಟ್ ವತಿಯಿಂದ 2025ನೇ ಸಾಲಿನ ‘ಈ ಹೊತ್ತಿಗೆ ಪ್ರಶಸ್ತಿ’ಗಾಗಿ ಕನ್ನಡದ ಅಪ್ರಕಟಿತ ಕಥಾ ಸಂಕಲನಗಳನ್ನು ಮತ್ತು ಅಪ್ರಕಟಿತ ಕವನ ಸಂಕಲನಗಳನ್ನು ಆಹ್ವಾನಿಸುತ್ತಿದೆ.

ವಿಜೇತ ಕಥಾ ಸಂಕಲನಕ್ಕಾಗಿ ಮತ್ತು ಕವನ ಸಂಕಲನಕ್ಕಾಗಿ ತಲಾ 10,000/- (ಹತ್ತು ಸಾವಿರ) ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ಕೊಡಲಾಗುತ್ತದೆ.

ನಿಯಮಗಳು:
1. ಅಪ್ರಕಟಿತ ಸಂಕಲನದಲ್ಲಿರುವ ಕಥೆಗಳು/ಕವನಗಳು ಸ್ವತಂತ್ರವಾಗಿರಬೇಕು. ಸಂಕಲನದಲ್ಲಿ ಕಡ್ಡಾಯವಾಗಿ ಅನುವಾದಿತ ಕಥೆ/ಕವನಗಳಿರಕೂಡದು.
2. ಕಥಾ ಸಂಕಲನವು 8ರಿಂದ 10 ಕಥೆಗಳನ್ನು ಒಳಗೊಂಡಿರಬೇಕು.
3. ಕವನ ಸಂಕಲನವಾದರೆ 35-40 ಕವನಗಳನ್ನು ಒಳಗೊಂಡಿರಬೇಕು. ಚುಟುಕುಗಳನ್ನು ಕಳಿಸುವಂತಿಲ್ಲ.
4. ಡಿಟಿಪಿ ಮಾಡಿಸಿ, ಬೈಂಡ್ ಮಾಡಿಸಿದ ಅಪ್ರಕಟಿತ ಸಂಕಲನದ ಮೂರು ಪ್ರತಿಗಳನ್ನು ಈ ಹೊತ್ತಿಗೆಯ ಅಂಚೆ ವಿಳಾಸಕ್ಕೆ ಕಳುಹಿಸಿಕೊಡಬೇಕು.
5. ಕವಿಗಳು / ಕಥೆಗಾರರು ಪ್ರತ್ಯೇಕ ಹಾಳೆಯಲ್ಲಿ ತಮ್ಮ ಹೆಸರು, ಸಂಕಲನದ ಹೆಸರು, ಸಂಪೂರ್ಣ ವಿಳಾಸ, ಇತ್ತೀಚಿನ ಫೋಟೋ, ಮೊಬೈಲ್ ಸಂಖ್ಯೆಯನ್ನು ಬರೆದಿರಬೇಕು. ಸಂಕಲನದ ಯಾವುದೇ ಪುಟಗಳಲ್ಲಿ ಲೇಖಕರ ಹೆಸರು ಇರಕೂಡದು.
6. ಪ್ರಶಸ್ತಿ ಘೋಷಣೆಯಾದ 30 ದಿನಗಳಲ್ಲಿ ಪ್ರಶಸ್ತಿ ಪಡೆದ ಸಂಕಲನವು ಮುದ್ರಣಗೊಳ್ಳಬೇಕು. ಕೃತಿ ಮುದ್ರಣಗೊಂಡರೆ ಮಾತ್ರ ಘೋಷಿತ ಬಹುಮಾನದ ಮೊತ್ತ ಹಾಗು ಪ್ರಶಸ್ತಿ ಫಲಕವು ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ಸಲ್ಲುತ್ತದೆ.
7. ಪ್ರಶಸ್ತಿ ಪಡೆದ ಕೃತಿಯನ್ನು ಮುದ್ರಿಸುವಾಗ ಮುಖಪುಟ ಹಾಗು ಪುಸ್ತಕದ ಒಳ ಪುಟದಲ್ಲಿ ‘ಈ ಹೊತ್ತಿಗೆ (ಕಥಾ/ಕಾವ್ಯ) ಪ್ರಶಸ್ತಿ ವಿಜೇತ ಕೃತಿ’ ಎಂದು ಮುದ್ರಿಸಿರಬೇಕು.
8. ಹಸ್ತಪ್ರತಿಗಳನ್ನು ಮರಳಿಸಲಾಗುವುದಿಲ್ಲ.

ನಿಮ್ಮ ಅಪ್ರಕಟಿತ ಕಥಾ ಸಂಕಲನ, ಕವನ ಸಂಕಲನ ನಮಗೆ ತಲುಪಲು ಕೊನೆಯ ದಿನಾಂಕ 20 ನವೆಂಬರ್ 2024.

ಈ ಹೊತ್ತಿಗೆಯ ತೀರ್ಮಾನವೇ ಅಂತಿಮ. 2025ರ ಮಾರ್ಚಲ್ಲಿ ನಡೆಯುವ ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಯನ್ನು ನೀಡಲಾಗುವುದು.

ಹಸ್ತಪ್ರತಿ ಕಳುಹಿಸಲು ವಿಳಾಸ:
ಈ ಹೊತ್ತಿಗೆ, #65, ಮುಗುಳ್ನಗೆ, 3ನೇ ಅಡ್ಡರಸ್ತೆ ,
ಪಿ.ಎನ್.ಬಿ. ನಗರ, ದೊಡ್ಡಕಲ್ಲಸಂದ್ರ, ಕೋಣನಕುಂಟೆ,
ಬೆಂಗಳೂರು – 560062
ಸಂಪರ್ಕ ಸಂಖ್ಯೆ: 9611782621

MORE NEWS

‘ಸಾಹಿತ್ಯ ಬಂಗಾರ ಪ್ರಶಸ್ತಿ’ ಗೆ ಕುಂ.ವಿ, ಸುಶೀಲಮ್ಮ, ಪ್ರತಿಭಾ ಆಯ್ಕೆ

22-10-2024 ಬೆಂಗಳೂರು

ಬೆಂಗಳೂರು: ಎಸ್. ಬಂಗಾರಪ್ಪ ವಿಚಾರ ವೇದಿಕೆಯಿಂದ ಕೊಡಮಾಡುವ 2024ನೇ ಸಾಲಿನ ’ಸೇವಾ ಬಂಗಾರ ಪ್ರಶಸ್ತಿ’ ಗೆ ...

ಆಮೂರ ಅವರು ಬರವಣಿಗೆಯ ಬದುಕನ್ನು ತಪಸ್ಸಿನಂತೆ ಸಾಗಿಸಿದರು; ರಾಘವೇಂದ್ರ

21-10-2024 ಬೆಂಗಳೂರು

ಧಾರವಾಡ: ಜಿ.ಬಿ. ಜೋಶಿ ಮೆಮೊರಿಯಲ್‌ ಟ್ರಸ್ಟ್‌ ಹಾಗೂ ಡಾ.ಜಿ.ಎಸ್ ಆಮೂರ ಜನ್ಮ ಶತಮಾನೋತ್ಸವ ಸಮಿತಿಯಿಂದ &lsq...

‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭ

21-10-2024 ಬೆಂಗಳೂರು

ಬೆಂಗಳೂರು: ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ...