ಗುರುದೇವ, ರಜಿಯಾಗೆ ಕಸಾಪ ದತ್ತಿ ಪ್ರಶಸ್ತಿ

Date: 03-04-2025

Location: ಬೆಂಗಳೂರು


ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2024ನೇ ಸಾಲಿನ 'ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ ಪ್ರಶಸ್ತಿ'ಗೆ ಕನ್ನಡ ಪರ ಹೋರಾಟಗಾರ ಗುರುದೇವ ನಾರಾಯಣ ಕುಮಾರ ಮತ್ತು ಲೇಖಕಿ ಡಿ.ಬಿ.ರಜಿಯಾ ಆಯ್ಕೆಯಾಗಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ.

ಕನ್ನಡ ನಾಡು-ನುಡಿ, ಜಲ ಕುರಿತ ಚಿಂತಕರು, ಕನ್ನಡ ಪರ ಹೋರಾಟಗಾರರು ಅಥವಾ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದ ಇಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ.

ತಂದೆ ಜಿ.ನಾರಾಯಣ ಕುಮಾರ್ ಅವರ ಮಾರ್ಗದರ್ಶನದಲ್ಲಿ ಚಳವಳಿಗಳಲ್ಲಿ ಪಾಲ್ಗೊಂಡ ಗುರುದೇವ್ ಅವರು, ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಬಳ್ಳಾರಿಯ ಡಿ.ಬಿ.ರಜಿಯಾ ಅವರು ಕವಿತೆ ಮತ್ತು ಕಥಾ ಪ್ರಕಾರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.

MORE NEWS

ಶಿವರುದ್ರಪ್ಪ ಸೇರಿ ನಾಲ್ವರಿಗೆ ಕಸಾಪ ದತ್ತಿ ಪ್ರಶಸ್ತಿ

24-04-2025 ಬೆಂಗಳೂರು

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ‘ಡಾ.ಕೂ.ಗಿ.ಗಿರಿಯಪ್ಪ ಮತ್ತು ಶ್ರೀಮತಿ ಲಕ್ಷ್ಮೀದೇವಮ್ಮ ದತ್ತಿ ...

ಎರಡನೇ ವರ್ಗದ ಪ್ರಕಾಶಕರಿಂದ ಮಾತ್ರ ಕನ್ನಡ ಸಾಹಿತ್ಯ ಶ್ರೀಮಂತವಾಗಲು ಸಾಧ್ಯ: ಬಂಜಗೆರೆ

23-04-2025 ಬೆಂಗಳೂರು

ಬೆಂಗಳೂರು: ಕರ್ನಾಟಕ ಪ್ರಕಾಶಕರ ಸಂಘ ಹಾಗೂ ಬಿ.ಎಂ.ಶ್ರೀ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ವ...

ಕನ್ನಡ ಪುಸ್ತಕ ಪ್ರಾಧಿಕಾರದ 3 ವರ್ಷದ ಐದು ಪ್ರಶಸ್ತಿಗಳ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

22-04-2025 ಬೆಂಗಳೂರು

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2022, 2023 ಮತ್ತು 2024ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಾದ, ಅತ್ಯುತ್ತ...