Date: 04-09-2024
Location: ಬೆಂಗಳೂರು
ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು “ರಾಜ್ಯಮಟ್ಟದ ನಾಟಕ ರಚನಾ ಶಿಬಿರ"ವನ್ನು 2024 ಅ.03 ರಿಂದ ಅ. 07ರವರೆಗೆ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ಹಮ್ಮಿಕೊಂಡಿದೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಮತ್ತು ರಂಗಭೂಮಿಯಲ್ಲಿ ಹೆಸರು ಮಾಡಿರುವ18 ರಿಂದ 40 ವರ್ಷದೊಳಗಿರುವ 20 ಯುವ ಬರಹಗಾರರಿಗೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ನಾಡಿನ ಶ್ರೇಷ್ಠ ನಾಟಕಕಾರರು ಹಾಗೂ ಕಲಾವಿದರು ಈ ಶಿರದಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ. ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವವರು ದಿನಾಂಕ: 17.09.2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ವಿವರದೊಂದಿಗೆ ಅರ್ಜಿಯನ್ನು ಕಳುಹಿಸಬಹುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಶಿಬಿರಾರ್ಥಿಗಳ ನೋಂದಣಿ ಮತ್ತು ಪ್ರವೇಶ ಉಚಿತವಾಗಿದ್ದು, ರಂಗಭೂಮಿ ಕ್ಷೇತ್ರದ ಎಲ್ಲಾ ಯುವ ಬರಹಗಾರರು ಭಾಗವಹಿಸಬೇಕಾಗಿ ಕೋರಲಾಗಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಯನ್ನು ಕಳುಹಿಸಿಕೊಡಬೇಕಾದ ವಿಳಾಸ: ಶ್ರೀಮತಿ ನಿರ್ಮಲಾ ಮಠಪತಿ
ರಿಜಿಸ್ಟ್ರಾರ್
ಕರ್ನಾಟಕ ನಾಟಕ ಅಕಾಡೆಮಿ
ಕನ್ನಡ ಭವನ, ನೆಲಮಹಡಿ, ಚಾಲುಕ್ಯ ವಿಭಾಗ,
ಜೆ.ಸಿ.ರಸ್ತೆ, ಬೆಂಗಳೂರು
ದೂ: 080-22244176, 22237484 / 9481327867
ಬೆಂಗಳೂರು: ಕನ್ನಡದ ಖ್ಯಾತ ಕತೆಗಾರ ದಿವಂಗತ ಡಾ. ಬೆಸಗರಹಳ್ಳಿ ರಾಮಣ್ಣ ಅವರ ಸ್ಮರಣಾರ್ಥವಾಗಿ ಆರಂಭವಾಗಿರುವ ಡಾ. ಬೆಸಗರಹಳ...
ಬೆಂಗಳೂರು: ಯಕ್ಷವಾಹಿನಿ ಪ್ರತಿಷ್ಠಾನ ಮತ್ತು ಹೆಗ್ಗೋಡಿನ ಯಕ್ಷ ದುರ್ಗ ಕಲಾ ಬಳಗ ಜಂಟಿಯಾಗಿ ಹಮ್ಮಿಕೊಂಡಿದ್ದ ಪಿ. ಚಂದ್ರಿ...
ಬೀದರ್: ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿಗೆ ನಾಡಿನ ಹಿರಿಯ ...
©2024 Book Brahma Private Limited.