'ಸಂಗಮ ಸಿರಿ' ರಾಜ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

Date: 26-07-2024

Location: ಬೆಂಗಳೂರು


ಹುಬ್ಬಳ್ಳಿ: ನಾಡಿನ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಪ್ರತಿಷ್ಠಾಪನೆಗೊಂಡ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಇದರಿಂದ ಈ ವರ್ಷ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ರಾಜ್ಯಮಟ್ಟದ "ಸಂಗಮ ಸಿರಿ" ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

2023ರ ಸಾಲಿನಲ್ಲಿ ಪ್ರಕಟಗೊಂಡ ಕವನ ಸಂಕಲನದ ಎರಡು ಪ್ರತಿಗಳನ್ನು ಕಳಿಸಿಕೊಡಬೇಕು. ಈ ಪ್ರಶಸ್ತಿಯು 10,000 ರೂ. ಮೊತ್ತದೊಂದಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಎರಡು ವರ್ಷ ಈ ಪ್ರತಿಷ್ಠಾನದಿಂದ ವಚನ ಸಾಹಿತ್ಯದಲ್ಲಿನ ಸಾಧಕರಿಗೆ ಪ್ರಶಸ್ತಿ ನೀಡಲಾಗಿತ್ತು .ಈ ವರ್ಷ ಕಾವ್ಯ ಕ್ಷೇತ್ರಕ್ಕೆ ನೀಡಲು ನಿರ್ಧರಿಸಲಾಗಿದೆ. ಕವನ ಸಂಕಲನದ ಪುಸ್ತಕಗಳನ್ನು ಆ.16 ರೊಳಗೆ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ, ಮನೆ ನಂ.338 ಎರಡನೇ ಹಂತ ಗೋಕುಲ ರಸ್ತೆ, ಹುಬ್ಬಳ್ಳಿ ಇಲ್ಲಿಗೆ ಕಳಿಸಿಕೊಡಲು ಕೋರಲಾಗಿದೆ.

ಮಾಹಿತಿಗೆ ಮೊ.9060933596, 9986476733 ಗೆ ಸಂಪರ್ಕಿಸಬಹುದು ಎಂದು ಪ್ರತಿಷ್ಠಾಮದ ಅಧ್ಯಕ್ಷ ಜಿ.ಬಿ. ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ ತಿಳಿಸಿದ್ದಾರೆ.

 

MORE NEWS

ಸಮಗ್ರ ಕರ್ನಾಟಕದ ಕಲೆಯೊಂದಿದ್ದರೆ ಅದು ಯಕ್ಷಗಾನ ಮಾತ್ರ: ನರಹಳ್ಳಿ

16-09-2024 ಬೆಂಗಳೂರು

ಬೆಂಗಳೂರು: ಯಕ್ಷವಾಹಿನಿ ಪ್ರತಿಷ್ಠಾನ ಮತ್ತು ಹೆಗ್ಗೋಡಿನ ಯಕ್ಷ ದುರ್ಗ ಕಲಾ ಬಳಗ ಜಂಟಿಯಾಗಿ ಹಮ್ಮಿಕೊಂಡಿದ್ದ ಪಿ. ಚಂದ್ರಿ...

ಎಸ್.ಎಲ್.ಭೈರಪ್ಪ ಅವರಿಗೆ ‘ಶ್ರೀ ಚೆನ್ನರೇಣುಕ ಬಸವ ಪ್ರಶಸ್ತಿ’

16-09-2024 ಬೆಂಗಳೂರು

ಬೀದರ್: ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿಗೆ ನಾಡಿನ ಹಿರಿಯ ...

ಸಣ್ಣ ಕತೆಗಾರ್ತಿ, ರಂಗಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ

16-09-2024 ಬೆಂಗಳೂರು

ಬೆಂಗಳೂರು: ಸಣ್ಣ ಕತೆಗಾರ್ತಿ, ಆಕಾಶವಾಣಿ ಕಲಾವಿದೆ, ಅಂಕಣಗಾರ್ತಿ, ರಂಗಕಲಾವಿದೆ, ಕವಯಿತ್ರಿ, ಲೇಖಕಿಯಾಗಿ ಗುರುತಿಸಿಕೊಂಡ...