Date: 28-04-2024
Location: ಬೆಂಗಳೂರು
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಹಾಗೂ ಲಂಡನ್ ನ ಬಸವ ಅಂತರಾಷ್ಟ್ರೀಯ ಪ್ರತಿಷ್ಠಾನದ ಸಹಕಾರದಿಂದ ಅಕ್ಕಮಹಾದೇವಿ ಜಯಂತಿ ಪ್ರಯುಕ್ತ ವಚನ ಸಂಭ್ರಮ ಹಾಗೂ ನೈಜಿರಿಯಾದ ಅಂತರಾಷ್ಟ್ರೀಯ ಕಾವ್ಯ ಪ್ರಶಸ್ತಿ ಪುರಸ್ಕೃತೆ ಡಾ. ಮಮತಾ ಸಾಗರ್ ಅವರಿಗೆ ಅಭಿನಂದನೆ ಕಾರ್ಯಕ್ರಮವು 2024 ಏಪ್ರಿಲ್ 27 ಶನಿವಾರದಂದು ನಗರದ ಜೆ.ಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಐ.ಎ.ಎಸ್ ಡಾ.ಸಿ ಸೋಮಶೇಖರ್ ಅವರು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಕರ್ನಾಟಕ ಲೇಖಕಿಯರ ಸಂಘದ ಡಾ.ಎಚ್.ಎಲ್. ಪುಷ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ನ.ಜಿ.ಶ.ಸಾ ಪರಿಷತ್ತಿನ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ವಹಿಸಿದ್ದರು.
ಬೆಳಗಾವಿ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಬೆಳಗಾವಿ ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಮತ್ತು ಕೃಷ್ಣಮೂರ್ತಿ ...
ಅರಿವು ಟ್ರಸ್ಟ್, ಬಳ್ಳಾರಿ ವತಿಯಿಂದ ಆಯೋಜಿಸಿದ್ದ 2023ನೇ ಸಂಗಂ ಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭವು ಬಳ್ಳಾರಿಯ ಶ್ರೀ...
ಬೆಂಗಳೂರು: ಹರಿವು ಬುಕ್ಸ್ ಹಾಗೂ ತೇಜು ಪಬ್ಲಿಕೇಶನ್ಸ್ ವತಿಯಿಂದ ಲೇಖಕಿ ಮಂಗಳ ಎಂ. ನಾಡಿಗ್ ಅವರ ‘ಪ್ರೀತಿಯ ಚಿಟ್ಟ...
©2024 Book Brahma Private Limited.