ಈ ಬಾರಿಯ ದಸರಾ ಮಹೋತ್ಸವ ಉದ್ಘಾಟಕರಾಗಿ ಸಾಹಿತಿ ಹಂಪ ನಾಗರಾಜಯ್ಯ ಆಯ್ಕೆ

Date: 20-09-2024

Location: ಬೆಂಗಳೂರು


ಮೈಸೂರು: ನಾಡಿನ ಪ್ರಸಿದ್ಧ ಹಿರಿಯ ಸಾಹಿತಿ, ಸಂಶೋಧಕ ಹಂಪ ನಾಗರಾಜಯ್ಯ ಅವರು ಈ ಬಾರಿ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರದಂದು ಘೋಷಿಸಿದ್ದಾರೆ.

ಈ ಕುರಿತಂತೆ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಶೀಘ್ರದಲ್ಲೇ ಹಂಪನಾ ಅವರಿಗೆ ಅಧಿಕೃತವಾಗಿ ಆಹ್ವಾನ ಕೊಡಲಾಗುವುದು. ಉನ್ನತ ಮಟ್ಟದ ಸಭೆಯನ್ನು ಈಚೆಗೆ ಏರ್ಪಡಿಸಿದ್ದು, ಅದರಲ್ಲಿ ಉದ್ಘಾಟಕರ ಆಯ್ಕೆಯನ್ನು ನನ್ನ ವಿವೇಚನೆಗೆ ಬಿಟ್ಟಿದ್ದರು,” ಎಂದು ತಿಳಿಸಿದರು.

ಮೈಸೂರು ದಸರಾ ಮಹೋತ್ಸವವು 2024ರ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದ್ದು, ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.

MORE NEWS

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಮೂರು ದಿನಗಳ ಕಮ್ಮಟ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

19-09-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೋಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲ...

ದಲಿತ ಬಂಡಾಯದ ಜೊತೆಗೆ ಮಹಿಳಾ ಎಂದು ಸೇರಿಸಬೇಕು; ಲಲಿತಾ ಸಿದ್ಧಬಸವಯ್ಯ

19-09-2024 ಬೆಂಗಳೂರು

ಬೆಂಗಳೂರು: ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಕನ್ನಡ ಸಂಘದ ಸುವರ್ಣ ಮಹೋತ್ಸವ 2024ರ ಅಂಗವಾಗಿ ಏರ್ಪಡಿಸಿದ್ದ ಎರಡು ದಿನಗಳ ...

ಸಮಕಾಲೀನ ಸಾಮಾಜಿಕ ವಿಚಾರಗಳನ್ನು ಕುರಿತ ಮೂರು ದಿನಗಳ "ವಿಚಾರ ಕಮ್ಮಟ" ಸಂವಾದ ಕಾರ್ಯಾಗಾರ

17-09-2024 ಬೆಂಗಳೂರು

ಬೆಂಗಳೂರು: ಕನ್ನಡದ ಖ್ಯಾತ ಕತೆಗಾರ ದಿವಂಗತ ಡಾ. ಬೆಸಗರಹಳ್ಳಿ ರಾಮಣ್ಣ ಅವರ ಸ್ಮರಣಾರ್ಥವಾಗಿ ಆರಂಭವಾಗಿರುವ ಡಾ. ಬೆಸಗರಹಳ...