ಹರಿದಾಸ ಸಾಹಿತ್ಯದ ಮೇರು ಶೃಂಗ ಶ್ರೀವಿಜಯದಾಸರು: ಅರಳುಮಲ್ಲಿಗೆ ಪಾರ್ಥಸಾರಥಿ

Date: 30-04-2024

Location: ಬೆಂಗಳೂರು


ಬೆಂಗಳೂರಿನ ಚಾಮರಾಜಪೇಟೆಯ ರಾಘವೇಂದ್ರ ಕಾಲೋನಿಯ ಶ್ರೀಪಾದರಾಜ ಸಭಾಭವನದಲ್ಲಿ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಟ್ರಸ್ಟ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಹರಿದಾಸ ಸಾಹಿತ್ಯ ವಿಚಾರ ಸಂಕಿರಣ 'ಶ್ರೀ ವಿಜಯದಾಸರ ಜೀವನ ಮತ್ತು ಸಾಹಿತ್ಯ 'ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಅಂತರಾಷ್ಟ್ರೀಯ ಖ್ಯಾತಿಯ ಹರಿದಾಸ ವಿದ್ವಾಂಸ ಅರಳು ಮಲ್ಲಿಗೆ ಪಾರ್ಥಸಾರಥಿ ಮಾತನಾಡುತ್ತಾ ಹರಿದಾಸ ಸಾಹಿತ್ಯವನ್ನು ಪುನರುತ್ಥಾನ ಮಾಡಿದ ದ್ವಿತೀಯ ಘಟ್ಟದ ಮೇರು ಶೃಂಗ ಶ್ರೀ ವಿಜಯ ದಾಸರ ಜೀವನ ಸಾಧನೆ ಅಧ್ಯಾತ್ಮ ಸಾಧಕರಿಗೆ ಸ್ಪೂರ್ತಿಯ ಚಿಲುಮೆ. ಕನ್ನಡದ ಸವಿ ನುಡಿಯಲ್ಲಿ ವೇದ ವೇದಾಂತದ ತಿರುಳನ್ನು ನೀಡಿ  ಉಪಕರಿಸಿದ ಅವರ ಕೀರ್ತನೆಗಳು ಇoದಿಗೂ ಪ್ರಸ್ತುತವಾಗಿದೆ ಎಂದು ತಿಳಿಸಿದರು. 

ಹರಿದಾಸ ಸಾಹಿತ್ಯದ ವಿದ್ವಾಂಸರಾಗಿದ್ದ  ಕೀರ್ತಿಶೇಷ ಡಾ. ಕೆ. ಗೋಕುಲ್ ನಾಥ್ ಅವರ ಆಶಯದಂತೆ ಪ್ರತಿ ತಿಂಗಳ ನಾಲ್ಕನೇ ಭಾನುವಾರದಂದು ವಿಜಯ ದಾಸರ ಜೀವನ ಮತ್ತು ಸಾಹಿತ್ಯದ ಬಗ್ಗೆ ವಿಚಾರಗೋಷ್ಠಿ ಏರ್ಪಡಿಸಿ ಜಿಜ್ಞಾಸು ವೃಂದಕ್ಕೆ ಅವರ ಕೃತಿಗಳ ಕುರಿತು ಅವಲೋಕನ ಕಾರ್ಯಕ್ರಮ ಮಾಡುವ ಮೂಲಕ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಮಾದರಿ ಉಪಕ್ರಮವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಮುಳಬಾಗಿಲು ಶ್ರೀಪಾದರಾಜ ಮಠದ ಶ್ರೀ ಸುಜಯ ನಿಧಿ ತೀರ್ಥ ಶ್ರೀಪಾದರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.

ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿರುವ ಹರಿದಾಸ ಚಿಂತಕ  ಸೇಡಂನ ಡಾ ವಾಸುದೇವ ಅಗ್ನಿಹೋತ್ರಿ ಪ್ರಾಸ್ತಾವಿಕ ನುಡಿಗಳ ನಾಡಿದರು. ಸಂಸ್ಥೆಯ ಕಾರ್ಯದರ್ಶಿ ಡಾ. ಎಚ್ ಬಿ ಲಕ್ಷ್ಮೀನಾರಾಯಣ ಆಚಾರ್ಯ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯಿಂದ ಪ್ರಕಟವಾದ ಡಾ.ಆ.ರಾ ಪಂಚಮುಖಿ ರವರ ಶ್ರೀಮದ್ ಭಾಗವತ ಭಾಸ್ಕರ ದರ್ಶನ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ವಿಚಾರ ಸಂಕಿರಣದಲ್ಲಿ ಮಂಡ್ಯದ ವರಾಹ ವಿಠಲದಾಸರು 'ವಿಜಯ ರಾಯರ  ಕವಚದ' ಬಗ್ಗೆ ಹಾಗೂ ಮೈಸೂರು ವಿವಿಯ ಪ್ರಸಾರಂಗದ  ನಿರ್ದೇಶಕ ಡಾ.ಬಿ ಎಸ್ ಅನಿಲ್ ಕುಮಾರ್ ಬೊಮ್ಮಘಟ್ಟ ರವರು 'ವಿಜಯದಾಸರ  ಕೃತಿಗಳಲ್ಲಿ ಜೀವನಾದರ್ಶನದ 'ಬಗ್ಗೆ ಪ್ರಬಂಧ ಮಂಡಿಸಿದರು .ಸಂಸ್ಥೆಯ ಡಾ .ಎಸ್ ಎಲ್ ಮಂಜುನಾಥ್ ಸ್ವಾಗತಿಸಿದರು, ಆರ್ ವಾದಿರಾಜು ನಿರೂಪಣೆ ಮಾಡಿದರು.

 

 

MORE NEWS

ಎರಡನೇ ವರ್ಗದ ಪ್ರಕಾಶಕರಿಂದ ಮಾತ್ರ ಕನ್ನಡ ಸಾಹಿತ್ಯ ಶ್ರೀಮಂತವಾಗಲು ಸಾಧ್ಯ: ಬಂಜಗೆರೆ

23-04-2025 ಬೆಂಗಳೂರು

ಬೆಂಗಳೂರು: ಕರ್ನಾಟಕ ಪ್ರಕಾಶಕರ ಸಂಘ ಹಾಗೂ ಬಿ.ಎಂ.ಶ್ರೀ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ವ...

ಕನ್ನಡ ಪುಸ್ತಕ ಪ್ರಾಧಿಕಾರದ 3 ವರ್ಷದ ಐದು ಪ್ರಶಸ್ತಿಗಳ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

22-04-2025 ಬೆಂಗಳೂರು

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2022, 2023 ಮತ್ತು 2024ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಾದ, ಅತ್ಯುತ್ತ...

ವಿಶ್ವ ಪುಸ್ತಕ ದಿನದಂದು ಚಾಲನೆ ಪಡೆಯಲಿರುವ 'ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘ'

22-04-2025 ಬೆಂಗಳೂರು

ಕನ್ನಡ ಪುಸ್ತಕೋದ್ಯಮ ಓದುಗರ ಕೊರತೆ, ಹೊಸ ಆಲೋಚನೆಗಳ ಅಲಭ್ಯತೆ ಮತ್ತು ಸರ್ಕಾರ-ಸಂಸ್ಥೆಗಳ ಸಮರ್ಪಕ ಬೆಂಬಲವಿಲ್ಲದೆ ಸಂಕಷ್ಟ...