Date: 20-03-2025
Location: ಮಂಡ್ಯ
ಮಂಡ್ಯ: ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ 5ನೇ ವರ್ಷದ ‘ಕೆ.ಎಸ್.ನ ಸಾಹಿತ್ಯ ಪ್ರಶಸ್ತಿ’ಗೆ ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ಮತ್ತು ದಕ್ಷಿಣ ಕನ್ನಡದ ಸಾಹಿತಿ ನಾ. ದಾಮೋದರ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ಇದೇ ವೇಳೆ ‘ಕೆ.ಎಸ್.ನ ಕಾವ್ಯ ಗಾಯನ ಪ್ರಶಸ್ತಿ’ಗೆ ಧಾರವಾಡದ ಖ್ಯಾತ ಗಾಯಕಿ ಸಂಗೀತಾ ಕಟ್ಟಿ ಹಾಗೂ ಕಾಸರಗೋಡಿನ ರಮೇಶ್ ಚಂದ್ರ ಭಾಜನರಾಗಿದ್ದಾರೆ.
ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಮಾರ್ಚ್ 23ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಟ್ರಸ್ಟ್ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಬಸವಕಲ್ಯಾಣ: "ಯೂರೋಪ್ ನಮಗೆ ಅರ್ಥವಾದಷ್ಟು ಯೂರೋಪಿಗೆ ನಾವು ಅರ್ಥವಾಗಿಲ್ಲ. ಕನ್ನಡ ಸಾಹಿತ್ಯ ಅನುವಾದಿಸುವ ಮೂಲಕ ಕನ...
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸ...
ಧಾರವಾಡ: ಸಕ್ಕರಿ ಬಾಳಾಚಾರ್ಯ (ಶಾಂತಕವಿ) ಟ್ರಸ್ಟ್, ಧಾರವಾಡ ಜಿ. ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್, ಧಾರವಾಡ ಕುರ್ತಕೋಟಿ ...
©2025 Book Brahma Private Limited.