ಗುರುದೇವ, ರಜಿಯಾಗೆ ಕಸಾಪ ದತ್ತಿ ಪ್ರಶಸ್ತಿ

Date: 03-04-2025

Location: ಬೆಂಗಳೂರು


ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2024ನೇ ಸಾಲಿನ 'ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ ಪ್ರಶಸ್ತಿ'ಗೆ ಕನ್ನಡ ಪರ ಹೋರಾಟಗಾರ ಗುರುದೇವ ನಾರಾಯಣ ಕುಮಾರ ಮತ್ತು ಲೇಖಕಿ ಡಿ.ಬಿ.ರಜಿಯಾ ಆಯ್ಕೆಯಾಗಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ.

ಕನ್ನಡ ನಾಡು-ನುಡಿ, ಜಲ ಕುರಿತ ಚಿಂತಕರು, ಕನ್ನಡ ಪರ ಹೋರಾಟಗಾರರು ಅಥವಾ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದ ಇಬ್ಬರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ.

ತಂದೆ ಜಿ.ನಾರಾಯಣ ಕುಮಾರ್ ಅವರ ಮಾರ್ಗದರ್ಶನದಲ್ಲಿ ಚಳವಳಿಗಳಲ್ಲಿ ಪಾಲ್ಗೊಂಡ ಗುರುದೇವ್ ಅವರು, ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಬಳ್ಳಾರಿಯ ಡಿ.ಬಿ.ರಜಿಯಾ ಅವರು ಕವಿತೆ ಮತ್ತು ಕಥಾ ಪ್ರಕಾರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.

MORE NEWS

2025 Booker prize; ಕಿರುಪಟ್ಟಿಯಲ್ಲಿ ಬಾನು ಮುಷ್ತಾಕ್‌ ಅವರ ಅನುವಾದಿತ 'ಹಾರ್ಟ್‌ ಲ್ಯಾಂಪ್‌' ಕೃತಿ

08-04-2025 ಬೆಂಗಳೂರು

ಲಂಡನ್: ಪ್ರತಿಷ್ಠಿತ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿಯ ಕಿರುಪಟ್ಟಿ ಪ್ರಕಟವಾಗಿದ್ದು, ಕನ್ನಡದ ಸಾಹಿತಿ ಬಾನು ಮುಸ್ತಾಕ್...

ಸವಿರಾಜ್ ಆನಂದೂರು ಹಾಗೂ ದಸ್ತಗೀರ ದಿನ್ನಿಗೆ ‘ಸಹೃದಯ ಕಾವ್ಯ ಪ್ರಶಸ್ತಿ’

08-04-2025 ಬೆಂಗಳೂರು

ಸವದತ್ತಿ: ಸಹೃದಯ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ‘ಸಹೃದಯ ಕಾವ್ಯ ಪ್ರಶಸ್ತಿ’ಗಾಗಿ ಈ ಬಾರಿ ...

ಸಮಾಜಮುಖಿ ಕಥಾ ಪುರಸ್ಕಾರ-2024 ಫಲಿತಾಂಶ ಪ್ರಕಟ

07-04-2025 ಬೆಂಗಳೂರು

ಬೆಂಗಳೂರು: ಸಮಾಜಮುಖಿ ಪ್ರಕಾಶನವು 2024ನೇ ಸಾಲಿನ ವಾರ್ಷಿಕ ಕಥಾ ಸ್ಪರ್ಧೆಯ ಫಲಿತಾಂಶವನ್ನು ಘೋಷಿಸಿದೆ. ವೀರೇಶ ಶಿವಲ...