`ಕನ್ನಡನಾಡು ಸಾಹಿತ್ಯ ಶ್ರೀ ಪ್ರಶಸ್ತಿ' ವಿಶ್ವನಾಥ ಭಕರೆ ಭಾಜನ

Date: 24-02-2023

Location: ಬೆಂಗಳೂರು


ಕಲಬುರ್ಗಿಯ ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘ ಕೊಡಮಾಡುವ, ಕಲ್ಯಾಣ ಕರ್ನಾಟಕ ಪ್ರದೇಶದ ಉತ್ತಮ ಲೇಖಕರು ಹಾಗೂ ಕೃತಿಗಳಿಗೆ ನೀಡಲಾಗುವ 2021ನೇ ಸಾಲಿನ ಪ್ರಶಸ್ತಿಗೆ ವಿಶ್ವನಾಥ ಭಕರೆ ಆಯ್ಕೆಯಾಗಿದ್ದಾರೆ.

ದಕ್ಷ ಪೊಲೀಸ್‌ ಅಧಿಕಾರಿ ಹುತಾತ್ಮ ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಅವರ ಕುರಿತಾದ ವಸ್ತುನಿಷ್ಠ ಕಾದಂಬರಿ “ಬಿಸಿಲೂರಿನ ಬಂಡೆ” ಕೃತಿ ಆಯ್ಕೆಯಾಗಿದೆ ಎಂದು ಕನ್ನಡನಾಡು ಪ್ರಕಾಶನ ಸಂಸ್ಥೆಯ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ ಅವರು ತಿಳಿಸಿದ್ದಾರೆ.

ಫೆಬ್ರವರಿ 26 ರಂದು ಕಲಬುರಗಿಯ ವೈ.ಜಿ. ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಬೆಳ್ಳಿಗೆ 10:30ಕ್ಕೆ ಎಂಟು ಕೃತಿಗಳ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವನಾಥ ಭಕರೆ ಅವರ ಲೇಖಕರ ಪರಿಚಯಕ್ಕಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ...

MORE NEWS

2025ನೇ ಸಾಲಿನ ಬುಕ್‌ ಬ್ರಹ್ಮ ಕಥಾ ಸ್ಪರ್ಧೆ - ಕಾದಂಬರಿ ಪುರಸ್ಕಾರಕ್ಕೆ ಆಹ್ವಾನ

30-03-2025 ಬೆಂಗಳೂರು

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2025 ಮತ್ತು ಕಾದಂಬರಿ ಪುರಸ್ಕಾರ 2025ʼ ರೂ. 2 ಲಕ್ಷ 69 ಸ...

ಮಾಲತಿ ಪಟ್ಟಣಶೆಟ್ಟಿ, ಎಸ್.ಜಿ.ಸಿದ್ದರಾಮಯ್ಯ ಅವರಿಗೆ `ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ'

27-03-2025 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಗುರುಲಿಂಗ ಕಾಪಸೆ ದತ್ತಿಯಡಿ ನೀಡಲಾಗುವ ಗುರುಲಿಂಗ ಕಾಪಸೆ ಸಾಹಿತ್ಯ ಪ್ರ...

ಭಾನುಪ್ರಕಾಶ್ ಶರ್ಮ ಮತ್ತು ಶ್ರೀಧರ ದೀಕ್ಷಿತ್ ಗೆ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ 

25-03-2025 ಬೆಂಗಳೂರು

ಮೈಸೂರಿನ ಶ್ರೀ ವಾಸುದೇವ ಮಹಾರಾಜ್ ಫೌಂಡೇಶನ್ ವತಿಯಿಂದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಶ್ರೀ ವಾಸುದೇವ ಮಹಾರಾಜ 88...