ಕು. ವಿಹಾರಿಕಾ ಅಂಜನಾ ಹೊಸಕೇರಿ ಅವರು ಬರೆದಿರುವ ‘ಪ್ರವಾಸದ ಆ ದಿನಗಳು’ ಕೃತಿ ಲೋಕಾರ್ಪಣೆ

Date: 18-04-2025

Location: ಬೆಂಗಳೂರು


ಬೆಂಗಳೂರು: ಉದಯ ಪ್ರಕಾಶನ, ಬೆಂಗಳೂರು ಇವರ ಆಶ್ರಯದಲ್ಲಿ ಕು. ವಿಹಾರಿಕಾ ಅಂಜನಾ ಹೊಸಕೇರಿ ಅವರು ಬರೆದಿರುವ ‘ಪ್ರವಾಸದ ಆ ದಿನಗಳು’ ಪ್ರವಾಸ ಕಥನ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ನಗರದ ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಕನ್ನಡ ಸಾಹಿತ್ಯ ಪರಿಷತ್ತಿನ “ಕುವೆಂಪು ಸಭಾಂಗಣ”ದಲ್ಲಿ ಆಯೋಜಿಸಲಾಗಿತ್ತು.

“ಪ್ರವಾಸದ ಆ ದಿನಗಳು” ಪ್ರವಾಸ ಕಥನ ಗ್ರಂಥವನ್ನು ಡಾ. ಎಚ್.ಎಲ್. ಪುಷ್ಪ, ಅಧ್ಯಕ್ಷರು, ಕರ್ನಾಟಕ ಲೇಖಕಿಯರ ಸಂಘ, ಬೆಂಗಳೂರು ಇವರು ಲೋಕಾರ್ಪಣೆ ಮಾಡಿದರು. ಬೆಂಗಳೂರಿನ ಪ್ರೊ. ಸುಕನ್ಯಾ ಬಿ. ಮಾರುತಿ, ಖ್ಯಾತ ಕವಯಿತ್ರಿ ಮತ್ತು ನಿವೃತ್ತ ಕನ್ನಡ ಪ್ರಾಧ್ಯಾಪಕರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಡಾ. ರವಿಶಂಕರ್ ಎ.ಕೆ., ಕನ್ನಡ ಸಹಾಯಕ ಪ್ರಾಧ್ಯಾಪಕರು, ಕ್ರಿಸ್ತು ಜಯಂತಿ ಕಾಲೇಜು ಬೆಂಗಳೂರು ಇವರು ಗ್ರಂಥವನ್ನು ಕುರಿತು ಮಾತನಾಡಿದರು. ನಂತರ ಲೇಖಕಿ ಕು. ವಿಹಾರಿಕಾ ಅಂಜನಾ ಹೊಸಕೇರಿ ಅವರು ಈ ಪ್ರವಾಸ ಕಥನ ಗ್ರಂಥವನ್ನು ಕುರಿತು ತಮ್ಮ ಅನುಭವವನ್ನು ಹಂಚಿಕೊAಡರು. ಶಾಸ್ತçಚೂಡಾಮಣಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ವಿಶ್ರಾಂತ ಕುಲಪತಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಬೆಂಗಳೂರು ಇವರು ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

MORE NEWS

‘ಹೊಂಗಿರಣ’ ರಾಜ್ಯ ಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ

07-05-2025 ಬೆಂಗಳೂರು

ಬೆಂಗಳೂರು: “ಹೊಂಗಿರಣ”ವು ರಾಜ್ಯ ಮಟ್ಟದ ಕವನ ಸ್ಪರ್ಧೆ ಹಾಗೂ ಕವಿಗೋಷ್ಠಿಗೆ ಆಹ್ವಾನ ನೀಡಿದೆ. ಸ್ಪರ್ಧೆ...

ಸಾಹಿತಿ, ವಿಮರ್ಶಕ ಜಿ.ಎಸ್.ಸಿದ್ದಲಿಂಗಯ್ಯ ಇನ್ನಿಲ್ಲ

07-05-2025 ಬೆಂಗಳೂರು

ಬೆಂಗಳೂರು: ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ...

ಸಂಗ ಸಾಹಿತ್ಯ ಪುರಸ್ಕಾರದ ಅಂತಿಮ ಹಂತಕ್ಕೆ ಐದು ಕಾದಂಬರಿಗಳು

06-05-2025 ಬೆಂಗಳೂರು

ಬಳ್ಳಾರಿಯ ಸಂಗಂ ಟ್ರಸ್ಟ್ ವತಿಯಿಂದ 2025ನೇ ಸಾಲಿನ ಸಂಗಂ ಸಾಹಿತ್ಯ ಕಾದಂಬರಿ ಪುರಸ್ಕಾರ ಕೃತಿಗಳನ್ನು ಆಹ್ವಾನಿಸಿದ್ದು, ಪ...