ಸೂಫಿ ಸಂತ, ತತ್ವಪದ ಗಾಯಕ ಇಬ್ರಾಹಿಂ ಸುತಾರ್ ನಿಧನ

Date: 05-02-2022

Location: ಬಾಗಲಕೋಟೆ


ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ಶನಿವಾರದಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೂಫಿ ಸಂತ, ತತ್ವಪದ ಗಾಯಕರೆಂದೇ ಪ್ರಸಿದ್ದರಾಗಿದ್ದ ಅವರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಇಂದು ಬೆಳಗ್ಗೆ 6.30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಮತ್ತೆ ಹೃದಯಘಾತವಾಗಿದ್ದು ಇಬ್ರಾಹಿಂ ಸುತಾರ್ ಅವರ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಅದರೆ ಚಿಕಿತ್ಸೆ ಫಲಕರಿಯಾಗದೇ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಸರ್ವಧರ್ಮ ಸಮನ್ವಯದ ಪ್ರತಿಪಾದಕ : ಇಬ್ರಾಹಿಂ ಸುತಾರ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದವರು.1940 ಮೇ 10ರಂದು ಜನಿಸಿದರು. ತಂದೆ ನಾಬಿಸಾಹೇಬ್ ತಾಯಿ ಅಮೀನಾಬಿ. ಬಡಗಿ ಕುಟುಂಬದಲ್ಲಿ ಜನಿಸಿದ ಅವರು ಬಡತನದ ಕಾರಣದಿಂದ ಮೂರನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದರು. ವೃತ್ತಿಯಾಗಿ ನೇಕಾರಿಕೆಯನ್ನು ಆಯ್ದುಕೊಂಡವರು. ಬಾಲ್ಯದಲ್ಲಿಯೇ ಕುರಾನ್ ಅಧ್ಯಯನ ಮಾಡಿ ಧಾರ್ಮಿಕತ್ವದ ಜೊತೆಗೆ ತತ್ವಪದ, ವಚನಗಳನ್ನು ಕಲಿತು ಉಪನಿಷತ್ತಿನ ಸಾರವನ್ನು ತಿಳಿದುಕೊಂಡವರು. ಅವರನ್ನು ಸರ್ವಧರ್ಮ ಸಮನ್ವಯದ ಪ್ರತಿಪಾದಕರೆಂದು ಕೂಡ ಗುರುತಿಸಲಾಗಿದೆ.

 

MORE NEWS

ಕನ್ನಡ ಪುಸ್ತಕ ಪ್ರಾಧಿಕಾರದ 2022, 2023 ಹಾಗೂ 2024ನೇ ಸಾಲಿನ ಪ್ರಶಸ್ತಿ ಪ್ರಕಟ

09-04-2025 ಬೆಂಗಳೂರು

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸ...

ಮಕ್ಕಳಿಗಾಗಿ ಕನ್ನಡ ಕಾವ್ಯ ಕಸ್ತೂರಿ ಮತ್ತು ರಂಗ-ಸಂಸ್ಕೃತಿ ಶಿಬಿರ

09-04-2025 ಧಾರವಾಡ

ಧಾರವಾಡ: ಸಕ್ಕರಿ ಬಾಳಾಚಾರ್ಯ (ಶಾಂತಕವಿ) ಟ್ರಸ್ಟ್, ಧಾರವಾಡ ಜಿ. ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್, ಧಾರವಾಡ ಕುರ್ತಕೋಟಿ ...

2025 Booker prize; ಕಿರುಪಟ್ಟಿಯಲ್ಲಿ ಬಾನು ಮುಷ್ತಾಕ್‌ ಅವರ ಅನುವಾದಿತ 'ಹಾರ್ಟ್‌ ಲ್ಯಾಂಪ್‌' ಕೃತಿ

08-04-2025 ಬೆಂಗಳೂರು

ಲಂಡನ್: ಪ್ರತಿಷ್ಠಿತ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿಯ ಕಿರುಪಟ್ಟಿ ಪ್ರಕಟವಾಗಿದ್ದು, ಕನ್ನಡದ ಸಾಹಿತಿ ಬಾನು ಮುಸ್ತಾಕ್...