ಸುಮಿತ್ ಮೇತ್ರಿ ಹಾಗೂ ಜಯಶ್ರೀ ಕದ್ರಿ ಅವರಿಗೆ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’

Date: 11-06-2024

Location: ಬೆಂಗಳೂರು


ಬೆಂಗಳೂರು: ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ದಿ|ಕುರಾಡಿ ಸೀತಾರಾಮ ಅಡಿಗರ ನೆನಪಿನ 'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ'ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ(ರಿ) ಉಡುಪಿ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಿತ್ತು.

ಪ್ರಶಸ್ತಿಗೆ ವಿಜಯಪುರದ ಸುಮಿತ್ ಮೇತ್ರಿಯವರ 'ಈ ಕಣ್ಣುಗಳಿಗೆ ಸದಾ ನೀರಡಿಕೆ' ಹಾಗೂ ಮಂಗಳೂರಿನ ಜಯಶ್ರೀ ಬಿ. ಕದ್ರಿ 'ಕೇಳಿಸದ ಸದ್ದುಗಳು' ಕೃತಿಗಳು ಆಯ್ಕೆಯಾಗಿರುತ್ತವೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ರವಿರಾಜ್ ಎಚ್. ಪಿ. ತಿಳಿಸಿದರು.

ಪ್ರಶಸ್ತಿಗೆ 42 ಕೃತಿಗಳು ಬಂದಿದ್ದು, ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕರಾದ ಬೆಂಗಳೂರಿನ ಪ್ರೊ. ಎಚ್. ದಂಡಪ್ಪ ಹಾಗೂ ಉಡುಪಿಯ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ತೀರ್ಪುಗಾರರಾಗಿ ಸಹಕರಿಸಿದ್ದರು.

ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿದ್ದು ಇಬ್ಬರಿಗೆ ಹಂಚಿಹೋಗಿವೆ . ಆಗಸ್ಟ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ನಡೆಸಲಾಗುವುದು ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೆೈ, ಅಧ್ಯಕ್ಷರಾದ ಪ್ರೊಫೆಸರ್ ಶಂಕರ್ ಹಾಗೂ ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನದ ನಿರ್ದೇಶಕರಾದ ನಾರಾಯಣ ಮಡಿ ಉಪಸ್ಥಿತರಿದ್ದರು.

 

MORE NEWS

`ಮ್ಯೂಸಿಕಲ್ ವಿಡಿಯೊ ಸಾಂಗ್ ಒಂದು ವಿಶಿಷ್ಟ ಪುಸ್ತಕ' ಲೋಕಾರ್ಪಣಾ ಸಮಾರಂಭ

06-09-2024 ಬೆಂಗಳೂರು

ಬೆಂಗಳೂರು: ಶ್ರೀ ಸಾಯಿಗನ ಪ್ರೊಡಕ್ಷನ್ಸ್ ಹಾಗೂ ವಾಯ್ಸಿಂಗ್ ಸೈಲೆನ್ಸ್, ಕಾವ್ಯಸ್ಪಂದನ ಪಬ್ಲಿಕೇಷನ್ಸ್ ವತಿಯಿಂದ ಮ್ಯೂಸಿಕ...

ಶ್ರೀಧರ ತುಮರಿ ಅವರ ‘ಪಕ್ಷಿಗಳ ವಿಸ್ಮಯ ವಿಶ್ವ’ ಕೃತಿಯ ವಿನ್ಯಾಸ ಮತ್ತು ಮುದ್ರಣಕ್ಕಾಗಿ ರಾಷ್ಟ್ರ ಪ್ರಶಸ್ತಿ

06-09-2024 ಬೆಂಗಳೂರು

ಬೆಂಗಳೂರು: The Federation of Indian Publishers ಭಾರತೀಯ ಪ್ರಕಾಶಕರ ಒಕ್ಕೂಟ, ನವ ದೆಹಲಿ ಇವರ ವತಿಯಿಂದ 2023-24ನ...

ಕರ್ನಾಟಕ ನಾಟಕ ಅಕಾಡೆಮಿಯಿಂದ ‘ರಾಜ್ಯಮಟ್ಟದ ನಾಟಕ ರಚನಾ ಶಿಬಿರ’ಕ್ಕೆ ಅರ್ಜಿ ಆಹ್ವಾನ

04-09-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು “ರಾಜ್ಯಮಟ್ಟದ ನಾಟಕ ರಚನಾ ಶಿಬಿರ"ವನ್ನು 2024 ಅ.03 ರಿಂದ ಅ. 07ರವ...